ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
ಆದರೆ ಜನಪದ ವೈಭವದ ಕಾಲವೂ ಒಂದಿತ್ತು, ಆ ದಿನಗಳಲ್ಲಿ ಅದೇ ಒಂದು ಪಂಗಡ,ಧರ್ಮವಾಗಿ ಬೇಳೆದಿತ್ತು. ಕಲೆಯ ಕಾಲಿಗೆ ಬಿದ್ದು ಗೌರವಿಸುವ ಕಾಲ ಅದಾಗಿತ್ತು. ರಾಜಾದಿರಾಜರಿಂದ ಕಡು ಬಡವನವರೆಗೂ ಅದನ್ನು ಕಲಿಯುವ ತವಕ ಇತ್ತು ಹಾಗಾದರೆ ಅವೆಲ್ಲ ಯಾವುದಾಗಿತ್ತು ಮತ್ತು ಇಂದು ಬೀದಿ ದೋಂಬರಾಟ ವಾಗಲು ಕಾರಣವೇನು ? ಮುಂದೆ ಓದಿ
ದೊಡ್ಡಾಟ
ಹೌದು! ಇಂದು ಸುಣ್ಣದ ಗೋಡೆಯಂತೆ ಮಾಯ ವಾಗುತ್ತಿದೆ. ಒಂದು ಕಾಲದಲ್ಲಿ ಊರಿಗೆ ಊರೇ ಈ ದೊಡ್ಡಾಟಕ್ಕೆ ಕಾದು ಕುಳಿತು ಹಳೆ ಕಥೆಗಳ ಚಿತ್ರಣ ಕಂಡುಕೊಂಡ ವೈಭವ ಈ ಕಲೆಗಿತ್ತು.

ಈ ಆಟಕ್ಕೆ ಇನ್ನು ಹತ್ತಿಪ್ಪತ್ತು ದಿನ ಇರವಾಗಲೇ ಆಡುವ ಜಾಗವನ್ನು ಆಯ್ಕೆ ಮಾಡಿ ಅಲ್ಲಿ ‘ಹಂದರಗಂಬ’ವೊಂದನ್ನು ನಿಲ್ಲಿಸುತ್ತಾರೆ. ಪೌರಾಣಿಕ ಪ್ರಸಂಗಗಳನ್ನು ಹೊಂದುವ ಈ ಆಟ ರಾತ್ರಿಯೆಲ್ಲಾ ನಡೆದು ಸೂರ್ಯೋ ಉಯದ ವೇಳೆಗೆ ಮುಕ್ತಾಯವಾಗುತ್ತದೆ. ಹಾಗಾಗಿ ಸುರಕ್ಷಿತ ಜಾಗ ಮುಖ್ಯವಾಗುತ್ತದೆ .
ಜನಗಳನ್ನು ಸೆಳೆಯುವಂತ ಮಾತು ಚಾತುರ್ಯ, ಪಾತ್ರ ಹೋಲುವಂತ ಬಣ್ಣ ಮತ್ತು ಮಂಟಪ ಈ ದೊಡ್ಡಾಟಕ್ಕೆ ಬಲು ಮುಖ್ಯ ವಾಗುತ್ತದೆ.
ಈ ಆಟದಲ್ಲಿ ಕೃಷ್ಣ – ಅರ್ಜುನ ಒಳಗೊಂಡು ರಾಮ, ಲಕ್ಷ್ಮಣ, ಈಶ್ವರ , ಪಾರ್ವತಿ ಪಾತ್ರದಂತೆ ಕುರುಕ್ಷೇತ್ರ , ಕೃಷ್ಣಸಂಧಾನ, ಪುಷ್ಪಹರಣ,ವಿರಾಟ ಪರ್ವ, ಕರ್ಣಪರ್ವ, ಸುಧನ್ವಾರ್ಜನ ,ತಾರಕಾಸುರ ವಧೆ, ವೀರ ಅಭಿಮನ್ಯು, ಆಶ್ವಮೇಧಯಾಗದ್ದು, ವಾಲಿ-ಸುಗ್ರೀವರ ಕಾಳಗದ್ದು, ದ್ರೌಪದೀ ವಸ್ತ್ರಾಪ-ಹರಣ, ರತಿ-ಕಲ್ಯಾಣ, ಲವಕುಶರ ಕಾಳಗ, ತಾಮ್ರಧ್ವಜನ ಕಾಳಗ, ಅಹಿರಾವಣ, ರಾವಣ, ಶ್ವೇತ ಚರಿತ್ರೆ, ಭೀಮಾರ್ಜುನರ ಯುದ್ದ, ಕರ್ಣಾರ್ಜುನ ಕಾಳಗ, ಕಲಾವತಿ ಸ್ವಯಂವರ, ವೃತ್ತಪಾಲಕರಾಜ, ದುರ್ಗಾಸುರ ಕಾಳಗ, ಭೀಷ್ಮ – ಪರ್ವ, ಸುಭದ್ರಾಕಲ್ಯಾಣ, ಭಕ್ತ ಮಾರ್ಕಂಡೇಯರು, ಸತ್ಯ – ಹರಿಶ್ಚಂದ್ರ, ಇಂದ್ರಜಿತು ಕಾಳಗ, ಹಿಡಂಬಿ ಕಲ್ಯಾಣ, ಊರ್ವಶಿ, ರಾಮಾಂಜನೇಯ ಯುದ್ದ , ಲಂಕಾದಹನ, ಜಲಂಧರನ ಕಾಳಗ, ಸಾನಂದ ಗಣೇಶ ಹೀಗೆ ಅನೇಕ ಪಾತ್ರ ಪರಿಚಯ ತಿಳಿಸಿಕೊಟ್ಟ ಸಿಂಹ ಪಾಲು ಈ ದೊಡ್ಡಾಟದ್ದು.
ಕಾಲ ಬದಲಾಗುತ್ತಿದೆ, ಬಣ ಮಾಸುತ್ತಿದೆ, ಪೀಳಿಗೆ ಬದಲಾಗಿ ಆಸಕ್ತಿ ಬೇರೆಡೆಗೆ ವಾಲುತ್ತಾ ಇಂತಹ ಕಲೆಗಳನ್ನು ಕಾಣುವುದು ಕಷ್ಟ.
ಆದರು ಇದನ್ನು ಆರಾಧ್ಯ ದೈವದಂತೆ ಪೂಜಿಸುತ್ತಾ, ಪೂರ್ವಜರ ಕಲೆಯನ್ನು ಪರಗತ ಮಾಡಿಕೊಂಡ ಪಂಗಡ ನಮ್ಮಲ್ಲೀ ಈಗಲೂ ಸಿಗುತ್ತಾರೆ ಆದರೆ ಅವರ ಸತ್ಕಾರ ತುಂಬಾ ಕಡಿಮೆ .. ಕಲೆಗಳನ್ನು ಬೆಳೆಸಿ
ಮುಂದೆ ಯಕ್ಷಗಾನ ತಿಳಿಯೋಣ…..
- Don’t miss visiting these 5 Shiva temples in Karthika Month-ಶಿವನ ದೇವಸ್ಥಾನDon’t miss visiting these 5 Shiva temples in Karthika Month-ಶಿವನ ದೇವಸ್ಥಾನ ಕಾರ್ತಿಕ ಮಾಸದಲ್ಲಿ ವಿಶೇಷವಾಗಿ ಶಿವನನ್ನು ಆರಾಧಿಸಲಾಗುತ್ತದೆ. ಪುರಾಣಗಳ ಪ್ರಕಾರ, ಕಾರ್ತಿಕ ಪೌರ್ಣಮಿಯ ದಿನದಂದೇ ಶಿವನು ತ್ರಿಪುರಾಸುರ ಎಂಬ ರಾಕ್ಷಸರನ್ನು ಸಂಹಾರ ಮಾಡುವ ಮೂಲಕ ಲೋಕವನ್ನು ರಕ್ಷಿಸಿದನು ಎಂದು ಹೇಳಲಾಗುತ್ತದೆ. ಈ ವಿಜಯದ… Read more: Don’t miss visiting these 5 Shiva temples in Karthika Month-ಶಿವನ ದೇವಸ್ಥಾನ
- Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್ Read this-Bhindi pepper fry Recipe in Kannada ಬೆಂಡೆಕಾಯಿ ಪೆಪ್ಪರ್ ಫ್ರೈ ಬೇಕಾಗುವ ಪದಾರ್ಥಗಳು… ಪನ್ನೀರ್- 1 ಬಟ್ಟಲು ಕಾರ್ನ್ ಫ್ಲೋರ್- 2-3 ಚಮಚ ಮೈದಾ- 2 ಚಮಚ ಉಪ್ಪು- ರುಚಿಗೆ ತಕ್ಕಷ್ಟು ಕಾಳುಮೆಣಸಿನ… Read more: Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್
- Shiva Ashtakam Lyrics-ಶಿವಾಷ್ಟಕಂShiva Ashtakam Lyrics-ಶಿವಾಷ್ಟಕಂ Read this-Shiva Shankara Lyrics ಶಿವಶಂಕರ ಸಾಹಿತ್ಯ ಪ್ರಭುಂ ಪ್ರಾಣನಾಥಂ ವಿಭುಂ ವಿಶ್ವನಾಥಂ ಜಗನ್ನಾಥ ನಾಥಂ ಸದಾನಂದ ಭಾಜಾಮ್ । ಭವದ್ಭವ್ಯ ಭೂತೇಶ್ವರಂ ಭೂತನಾಥಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 1 ॥ ಗಳೇ ರುಂಡಮಾಲಂ ತನೌ ಸರ್ಪಜಾಲಂ ಮಹಾಕಾಲ ಕಾಲಂ… Read more: Shiva Ashtakam Lyrics-ಶಿವಾಷ್ಟಕಂ
- Dalit CM faces backlash-ದಲಿತ ಮುಖ್ಯಮಂತ್ರಿಗೆ ತೀವ್ರ ವಿರೋಧDalit CM faces backlash-ದಲಿತ ಮುಖ್ಯಮಂತ್ರಿಗೆ ತೀವ್ರ ವಿರೋಧ ಕರ್ನಾಟಕ ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟ ತೀವ್ರಗೊಳ್ಳುವ ಲಕ್ಷಣ ಕಾಣಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಯಾರು ಸಿಎಂ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್… Read more: Dalit CM faces backlash-ದಲಿತ ಮುಖ್ಯಮಂತ್ರಿಗೆ ತೀವ್ರ ವಿರೋಧ
- Auspicious Karthika Month Begins-ಕಾರ್ತಿಕ ಮಾಸ ಆರಂಭAuspicious Karthika Month Begins-ಕಾರ್ತಿಕ ಮಾಸ ಆರಂಭ 2025 ರ ಕಾರ್ತಿಕ ಮಾಸ ಅಕ್ಟೋಬರ್ 22 ರಿಂದ ಪ್ರಾರಂಭವಾಗಿದೆ. ಈ ಮಾಸವು ವಿಷ್ಣು ಮತ್ತು ಶಿವನ ಪೂಜೆಗೆ ವಿಶೇಷವಾಗಿದೆ, ಕಾರ್ತಿಕ ಮಾಸವು ಆಧ್ಯಾತ್ಮಿಕವಾಗಿ ದೈವಿಕವಾಗಿದೆ. ಏಕೆಂದರೆ ಈ ಸಮಯದಲ್ಲಿ ವಿಷ್ಣು ಯೋಗ ನಿದ್ರೆಯಿಂದ ಎಚ್ಚರಗೊಳ್ಳುತ್ತಾನೆ. ಕಾರ್ತಿಕ ಮಾಸದಲ್ಲಿ… Read more: Auspicious Karthika Month Begins-ಕಾರ್ತಿಕ ಮಾಸ ಆರಂಭ
Support Us 


