HomeNewsRenukaswamy's father clarified about the rumour - ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

Renukaswamy’s father clarified about the rumour – ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

Renukaswamy's father clarified about the rumour - ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

Spread the love

Renukaswamy’s father clarified about the rumour – ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

ಚಿತ್ರದುರ್ಗ: ನಾವು ಶೆಡ್‌ಗೆ ಹೋಗಿಲ್ಲ, ನಟ ದರ್ಶನ್ ಅವರನ್ನು ಭೇಟಿಯಾಗಿಲ್ಲ ಎಂದು ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ತಂದೆ ಕಾಶೀನಾಥ್ ಶಿವನಗೌಡ್ರು ಸ್ಪಷ್ಟಪಡಿಸಿದ್ದಾರೆ.Victim Renukaswamy's father reacts to Darshan Thoogudeepa's interim bail  for spine surgery, expresses faith in justice system | - Times of India

Read this – CM Siddaramaiah Assembly Session  ಸಿಎಂ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನ

ಬೇಲ್ ಮೇಲೆ ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಅವರನ್ನು ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿದ್ದು, ಹಣ ಪಡೆದು ರಾಜಿಯಾಗಿದೆ. ಹೊಸ ಕಾರನ್ನು ಆ ಕುಟುಂಬ ಬುಕ್ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಯೊಂದು ಬಾರಿ ವೈರಲ್ ಆಗಿತ್ತು. ಹೀಗಾಗಿ ಇಂದು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾವು ದರ್ಶನ್ ಭೇಟಿಯಾಗಿಲ್ಲ, ಅವರು ಸಹ ನಮ್ಮನ್ನು ಭೇಟಿಯಾಗಿಲ್ಲ. ಅಲ್ಲದೇ ನಾವು ಯಾವುದೇ ಕಾರು ಖರೀದಿಸಿಲ್ಲ. ನಮಗೆ ಹಳೆಯ ಬೈಕ್ ರಿಪೇರಿ ಮಾಡಿಸಲು ಸಹ ದುಡ್ಡಿಲ್ಲ. ಯಾವ ಶೆಡ್‌ಗೂ ಹೋಗಿಲ್ಲ, ಹಣವನ್ನೂ ಪಡೆದಿಲ್ಲ. ಆದರೆ ಫೇಸ್‌ಬುಕ್ಕೊ ಅಥವಾ ಫೇಕ್ ಬುಕ್ಕೊ ನಮಗೆ ಗೊತ್ತಿಲ್ಲ. ನಾವೆಲ್ಲರೂ ರೇಣುಕಾಸ್ವಾಮಿ ಸಾವಿಂದ ಸಾಕಷ್ಟು ನೊಂದಿದ್ದೇವೆ. ದಯವಿಟ್ಟು ಆ ರೀತಿ ವದಂತಿ ಹರಡಿಸಬೇಡಿ ಎಂದು ಕಣ್ಣೀರಿಟ್ಟರು.

ಹಾಗೆಯೇ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ನ್ಯಾಯಯುತ ತನಿಖೆ ನಡೆಸಿರುವ ಸರ್ಕಾರವು, ದರ್ಶನ್‌ಗೆ ಬೇಲ್ ಸಿಕ್ಕಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಿರುವುದನ್ನು ನಮ್ಮ ಕುಟುಂಬದಿಂದ ಸ್ವಾಗತಿಸುತ್ತೇವೆ. ಈ ಕೇಸಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವ ಭರವಸೆ ಇದೆ. ಜೊತೆಗೆ ಸೊಸೆ ಸಹನಾಗೆ ಸರ್ಕಾರಿ ನೌಕರಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಕೆಲಸ ನೀಡಲು ಸಾಧ್ಯವಿಲ್ಲವೆಂದು ನಮಗೆ ಹಿಂಬರಹ ಬಂದಿದೆ. ಇದು ನಮಗೆ ದೊಡ್ಡ ಆಘಾತ ತಂದಿದೆ. ಹೀಗಾಗಿ ಸರ್ಕಾರ ಮತ್ತೊಮ್ಮೆ ಪರಿಶೀಲಿಸಿ ನಮ್ಮ ಸೊಸೆಗೆ ಸರ್ಕಾರಿ ನೌಕರಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.Kannada Actor Darshan Thoogudeepa Detained for Alleged Involvement in  Murder Case | Moviekoop

Read this – rcb retained players 2025  kannada ಆರ್‌ಸಿಬಿ 2025ರಲ್ಲಿ ಆಟಗಾರರನ್ನು ಉಳಿಸಿಕೊಂಡಿದೆ

ಯಾಕೆ ಈ ರೀತಿ ವದಂತಿ ಹರಡಿಸುತ್ತಿದ್ದಾರೆ ಎಂದು ನಾನು ಕಾನೂನು ಪಂಡಿತರನ್ನು ಕೇಳಲು ಇಚ್ಚಿಸುತ್ತೇನೆ. ಅವರು ದರ್ಶನ್ ಅಭಿಮಾನಿಗಳೋ ಮತ್ಯಾರೊ ನಮಗೆ ಗೊತ್ತಿಲ್ಲ. ಆದರೆ ಮತ್ತೊಮ್ಮೆ ಈ ರೀತಿ ವದಂತಿ ಹರಡಿಸಬೇಡಿ. ಒಂದು ವೇಳೆ ದರ್ಶನ್ ಭೇಟಿಗೆ ಧಾವಿಸಿದರೆ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ ರೇಣುಕಾಸ್ವಾಮಿ ಚಿಕ್ಕಪ್ಪ ಷಡಾಕ್ಷರಿ ಮಾತನಾಡಿ, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಗೆ ಫಾಸ್ಟ್ ಟ್ರಾಕ್ ಸಮಿತಿ ರಚಿಸುವಂತೆ ಒತ್ತಾಯಿಸಿದರು. ಅಲ್ಲದೇ ಫೇಸ್‌ಬುಕ್‌ಗಳಲ್ಲಿ ನಮ್ಮ ಕುಟುಂಬದ ಬಗ್ಗೆ ಸುಳ್ಳು ಸಂದೇಶ ಕಳುಹಿಸದಂತೆ ಮನವಿ ಮಾಡುದರು. ರೇಣುಕಾಸ್ವಾಮಿ ಸಾವಿಂದ ನೊಂದಿರುವ ಸಹನಾಗೆ ಸರ್ಕಾರದಿಂದ ಉದ್ಯೋಗ ನೀಡಬೇಕು. ರೇಣುಕಾಸ್ವಾಮಿ ಮಗು ಹಾಗೂ ತಾಯಿಗೆ ಜೀವನ ಸಾಗಿಸಲು ಸರ್ಕಾರ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.My son has come back': Father of Renukaswamy, victim of actor Darshan,  welcomes grandson | India News - Times of India

Read this – Kangana Ranawat starrer Emergency trailer release  ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್

ಈ ರೀತಿಯ ಫೇಕ್ ಸುದ್ದಿಯಿಂದ ಮನನೊಂದಿದ್ದೇವೆ. ದಯವಿಟ್ಟು ಫೇಸ್‌ಬುಕ್‌ನಲ್ಲಿ ವದಂತಿ ಹರಡಿಸಬೇಡಿ. ಜೊತೆಗೆ ಸಿಎಂ, ಡಿಸಿಎಂ ತನಿಖೆಗೆ ಸಹಕಾರ ನೀಡಿದ್ದು, ಸರ್ಕಾರದಿಂದ ನ್ಯಾಯ ಸಿಗುವ ಭರವಸೆ ಇದೆ. ಜೊತೆಗೆ ಗಣ್ಯರು ನೀಡಿರುವ ನೆರವಿನ ಹಣದಿಂದ ರೇಣುಕಾಸ್ವಾಮಿ ಪತ್ನಿ ಸಹನ ಹಾಗೂ ಕಾಶೀನಾಥ್ ಶಿವನಗೌಡ್ರು ಕುಟುಂಬದ ಮಧ್ಯೆ ಬಿರುಕು ವದಂತಿ ವಿಚಾರಕ್ಕೂ ಸ್ಪಷ್ಟನೆ ನೀಡಿದ್ದು, ಸೊಸೆಯಾದ ಸಹನ ಕುಟುಂಬ, ರೇಣುಕಾಸ್ವಾಮಿ ಕುಟುಂಬದ ಮಧ್ಯೆ ಯಾವುದೇ ವೈಮನಸ್ಸು ಇಲ್ಲ. ಎಲ್ಲಾ ಕುಟುಂಬಗಳು ಒಟ್ಟಾಗಿವೆ. ಸಾಂಪ್ರದಾಯಿಕ ವಾ ಗಿ ಮೊಮ್ಮಗು, ಸೊಸೆ ತವರುಮನೆಯಲ್ಲಿದ್ದಾರೆ. 5 ತಿಂಗಳು ಕಳೆದ ಬಳಿಕ ನಮ್ಮ ಮನೆಗೆ ಬರಲಿದ್ದಾರೆ ಎಂದರು.

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×