HomeNewsBhatkal’s Moorin Katte Controversy - ಭಟ್ಕಳದ ಮೂರಿನ್ ಕಟ್ಟೆಯ ಇತಿಹಾಸವೇನು?

Bhatkal’s Moorin Katte Controversy – ಭಟ್ಕಳದ ಮೂರಿನ್ ಕಟ್ಟೆಯ ಇತಿಹಾಸವೇನು?

ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66 ಬಳಿ ಇರುವ ಮೂರಿನ್​ ಕಟ್ಟೆ ವಿವಾದ ಉದ್ವಿಗ್ನಗೊಂಡಿದೆ.

Bhatkal’s Moorin Katte Controversy: The History and Reason Behind the Communal Clash – ಭಟ್ಕಳದ ಮೂರಿನ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Bhatkal) ಐತಿಹಾಸಿಕ ಮೂರಿನ್​ ಕಟ್ಟೆ (Moorinakatte) ಕಿಚ್ಚು ಜೋರಾಗಿದೆ. ಕಟ್ಟೆ ಪುನರ್​ ನಿರ್ಮಾಣಕ್ಕೆ ಅನ್ಯ ಕೋಮಿನ ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಕಟ್ಟೆಯನ್ನ ತೆರವುಗೊಳಿಸಲಾಗಿದೆ. ಇದು ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ. ನೂರಾರು ವರ್ಷಗಳ ಧಾರ್ಮಿಕ ಇತಿಹಾಸ ಹಾಗೂ ಭಕ್ತರ ಅಪಾರ ಶ್ರದ್ಧಾಕೇಂದ್ರವಾಗಿರುವ ಮೂರಿನ್ ಕಟ್ಟೆಯ ವಿವಾದ ಸದ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಾಂಶಗಳು
  • ಭಟ್ಕಳದ ಮೂರಿನ್ ಕಟ್ಟೆಗೆ ನೂರಾರು ವರ್ಷಗಳ ಇತಿಹಾಸ
  • ಮೂರಿನ್ ಕಟ್ಟೆಗೆ ಶಿರಸಿ ಮತ್ತು ಸಾಗರದ ಮಾರಿಕಾಂಬೆಯ ಸಂಬಂಧ
  • ಮುಸ್ಲಿಂರ ಆಕ್ರೋಶಕ್ಕೆ ಹಿಂದೂಗಳಿಂದ ಭಾರೀ ವಿರೋಧ

Read this – Anekal ; ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶಂಕುಸ್ಥಾಪನೆ

ಮೂರಿನ್ ಕಟ್ಟೆಯ ಇತಿಹಾಸವೇನು?

ಭಟ್ಕಳದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಐತಿಹಾಸಿಕ ಮೂರಿನ್ ಕಟ್ಟೆಗೆ ನೂರಾರು ವರ್ಷಗಳ ಇತಿಹಾಸವಿದೆ. ಭಟ್ಕಳದ ಈ ಮೂರಿನ್ ಕಟ್ಟೆಗೆ ಸುಪ್ರಸಿದ್ಧ ಶಿರಸಿ ಮತ್ತು ಸಾಗರದ ಮಾರಿಕಾಂಬಾ ದೇವಿಯ ಧಾರ್ಮಿಕ ಸಂಬಂಧವಿದೆ. ಸಾಗರದಿಂದ ಶಿರಸಿವರೆಗೆ ಮಾರಿಕಾಂಬಾ ದೇವಿಯ ‘ವಜ್ಜೆ’ (ದೇವಿಯ ನಿತ್ಯೋಪಯೋಗದ ವಸ್ತುಗಳು) ಇಡುವ ಪವಿತ್ರ ಸ್ಥಳಗಳಿದ್ದು, ಆ ಪೈಕಿ ಭಟ್ಕಳದ ಈ ಮೂರಿನ್ ಕಟ್ಟೆ ಕೂಡ ಒಂದಾಗಿದೆ.

ದೇವಿಯ ಈ ಪವಿತ್ರ ವಜ್ಜೆಯನ್ನು ಕಾಲಕಾಲಕ್ಕೆ ಒಂದೂರಿಂದ ಇನ್ನೊಂದು ಊರಿಗೆ, ಅಂದರೆ ಸಾಗರದಿಂದ ಶಿರಸಿವರೆಗೆ ಸ್ಥಳಾಂತರಿಸಲಾಗುತ್ತಿರುತ್ತದೆ. ಈ ಕಟ್ಟೆಯ ಮೇಲೆ ದೇವಿಯ ವಜ್ಜೆಯನ್ನಿಟ್ಟು ಭಕ್ತರು ಹರಕೆ ಕೇಳಿಕೊಂಡರೆ, ತಾಯಿ ಮಾರಿಕಾಂಬೆ ಅದನ್ನು ಈಡೇರಿಸುತ್ತಾಳೆ ಎಂಬ ಅಪಾರ ನಂಬಿಕೆ ಭಕ್ತರಲ್ಲಿದೆ.

ಹಿಂದೂ-ಮುಸ್ಲಿಮರ ಸಂಘರ್ಷಕ್ಕೆ ಕಾರಣ ಏನು?

ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಹೆದ್ದಾರಿಗೆ ಅಡ್ಡಿಯಾಗುತ್ತಿದ್ದ ಈ ಕಟ್ಟೆಯನ್ನು ಸ್ಥಳಾಂತರಿಸಲು ತೀರ್ಮಾನಿಸಲಾಗಿತ್ತು. ಅದರಂತೆ, ಮೂಲ ಮೂರಿನ್ ಕಟ್ಟೆಗೆ ಯಾವುದೇ ಧಕ್ಕೆ ಮಾಡದೆ, ಅದರ ಮೂಲ ಸ್ಥಾನದ ಪಕ್ಕದಲ್ಲೇ ಹೊಸದಾಗಿ ಮೂರಿನ್ ಕಟ್ಟೆ ನಿರ್ಮಿಸಲು ಇತ್ತೀಚೆಗೆ ಫೌಂಡೇಶನ್ ಹಾಕಲಾಗಿತ್ತು. ಆದರೆ, ಈ ಹೊಸ ಫೌಂಡೇಶನ್ ಕಲ್ಲನ್ನು ಕಿತ್ತೆಸೆದಿರುವ ಮುಸ್ಲಿಂ ಸಮುದಾಯದ ಕೆಲವರು, ಇಲ್ಲಿ ಕಟ್ಟೆ ನಿರ್ಮಾಣ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಂ ಸಮುದಾಯದ ಈ ನಡೆಗೆ ಭಟ್ಕಳದ ಹಿಂದೂ ಮುಖಂಡರು ಹಾಗೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಭಟ್ಕಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Read this – Online Astrology Scam; ಆನ್ ಲೈನ್ ಜ್ಯೋತಿಷ್ಯ ಹಗರಣ

ಇನ್ನು ಭಟ್ಕಳದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಒಟ್ಟಾರೆಯಾಗಿ, ಹೆದ್ದಾರಿ ಅಭಿವೃದ್ಧಿಯ ನಡುವೆ ಸೃಷ್ಟಿಯಾಗಿರುವ ಈ ಧಾರ್ಮಿಕ ಸಂಘರ್ಷ ಸದ್ಯ ಭಟ್ಕಳದಲ್ಲಿ ತೀವ್ರ ಆಕ್ರೋಶ ಮತ್ತು ಚರ್ಚೆಗೆ ಗ್ರಾಸವಾಗಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments