Daali dhananjay talks about shivarajkumar – ಶಿವರಾಜಕುಮಾರ್ ಬಗ್ಗೆ ಡಾಲಿ ಧನಂಜಯ್ ಮಾತನಾಡಿದ್ದಾರೆ
ನಟ ಶಿವಣ್ಣ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತಾಯ್ನಾಡಿಗೆ ಆಗಮಿಸಿದ ಬೆನ್ನಲ್ಲೇ ಡಾಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ನಟ ಮಾತನಾಡಿ, ಶಿವಣ್ಣ ಆರಾಮಾಗಿದ್ದಾರೆ. ಸದ್ಯದಲ್ಲೇ ಕೆಲವೇ ದಿನಗಳಲ್ಲಿ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
Read this – Police seized actor Darshans gun ನಟ ದರ್ಶನ್ ಗನ್ ಸೀಜ್ ಮಾಡಿದ ಪೊಲೀಸರು
ಶಿವಣ್ಣ ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ. ಅವರನ್ನು ಭೇಟಿ ಮಾಡಿದ ಡಾಲಿ ಧನಂಜಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಣ್ಣ ಅವರನ್ನು ನೋಡಿ ಬಹಳ ಖುಷಿ ಆಯಿತು. ಈಗ ಆರಾಮಾಗಿದ್ದಾರೆ. ಇನ್ನು ಎರಡು ಅಥವಾ ಮೂರು ವಾರದಲ್ಲಿ ಅವರು ಶೂಟಿಂಗ್ ಕೂಡ ಮಾಡಬಹುದು. ಅಂಥ ಪರಿಸ್ಥಿತಿಯನ್ನು ಅವರು ಗೆದ್ದು ಬಂದಿದ್ದಾರೆ. ಅವರು ಪ್ರತಿಯೊಬ್ಬರಿಗೂ ಸ್ಫೂರ್ತಿ. ಅವರು ಯಾರ ಮುಂದೆಯೂ ಅವರು ಕುಗ್ಗಲಿಲ್ಲ. ಇನ್ನೂ ಗಟ್ಟಿಯಾಗಿ ವಾಪಸ್ ಬಂದಿದ್ದಾರೆ ಎಂದು ಡಾಲಿ ಹೇಳಿದ್ದಾರೆ.
Read this – Renukaswamys father clarified about the rumour ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
ಇನ್ನೂ ಡಾಲಿ ಅವರು ಇದೇ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಮೈಸೂರಿನಲ್ಲಿ ನಡೆಯಲಿರುವ ಮದುವೆಗೆ ಚಿತ್ರರಂಗದ ಕಲಾವಿದರಿಗೆ ಮತ್ತು ರಾಜಕೀಯ ರಂಗದ ಗಣ್ಯರಿಗೆ ಮದುವೆಗೆ ಆಹ್ವಾನ ನೀಡಲಾಗಿದೆ.