HomeNewsHistoric Ranji Final in Hubballi-ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ |kannada Folks

Historic Ranji Final in Hubballi-ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ |kannada Folks

Ranji Trophy final arrives in Hubballi, bringing attention to Raj Nagar Stadium and its cricket history.

Historic Ranji Final in Hubballi-ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು?

ಫೆಬ್ರವರಿ 24ರಂದು ಹುಬ್ಬಳ್ಳಿಯ ರಾಜ್ ನಗರ KSCA ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವೆ ಐತಿಹಾಸಿಕ ರಣಜಿ ಫೈನಲ್ ಪಂದ್ಯ ನಡೆಯಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಕ್ರೀಡಾಂಗಣದಲ್ಲಿ ರಣಜಿ ಫೈನಲ್ ನಡೆಯುತ್ತಿರುವುದು ಇದೇ ಮೊದಲು. 16.5 ಎಕರೆ ವಿಸ್ತೀರ್ಣದ ಈ ಮೈದಾನದಲ್ಲಿ ಪಿಚ್ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಉತ್ಸಾಹ ಮನೆ ಮಾಡಿದೆ.

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ  ಬಗ್ಗೆ ನಿಮಗೆಷ್ಟು ಗೊತ್ತು? - Kannada News | Historic Ranji Final in Hubballi:  KSCA Stadium Prepares for Karnataka vs ...

Read this :ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ- Kannada News | Bangalore Braces for Record Cold| kannadafolks

ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್​​ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್ ಸೇರಿದಂತೆ ಅನೇಕ ಆಟಗಾರರು ಈ ಮೈದಾನದಲ್ಲಿ ಆಟವಾಡಿದ್ದಾರೆ.

ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ

Read this :India joins US-led initiative to-ಅಮೆರಿಕ ನೇತೃತ್ವದ ಸುರಕ್ಷಿತ ತಂತ್ರಜ್ಞಾನ |Kannada Folks

ಇಲ್ಲಿವರಗೆ ಒಂಭತ್ತು ರಣಜಿ ಪಂದ್ಯಗಳು ಹುಬ್ಬಳ್ಳಿಯಲ್ಲಿ ನಡೆದಿದ್ದು, ಮೂರು ಲಿಸ್ಟ್ ‘ಎ’ ಪಂದ್ಯಗಳು ನಡೆದಿವೆ. ಭಾರತ್-ಶ್ರೀಲಂಕಾ, ಭಾರತ‌ – ವೆಸ್ಟ್ ಇಂಡೀಸ್, ಭಾರತ-ನ್ಯೂಜಿಲೆಂಡ್ ತಂಡಗಳ ಸೆಣೆಸಾಟಕ್ಕೆ ಈ ಮೈದಾನ ಸಾಕ್ಷಿಯಾಗಿದೆ. ಆದರೆ ಇದೇ ಮೊದಲ ಬಾರಿಗೆ ರಣಜಿ ಫೈನಲ್ ಪಂದ್ಯ ಇಲ್ಲಿ ನಡೆಯುತ್ತಿದೆ.

16.5 ಎಕರೆ ವಿಸ್ತೀರ್ಣದಲ್ಲಿರುವ ಸ್ಟೇಡಿಯಂ

ಎಂಟು ಮುಖ್ಯ ಪಿಚ್, ಹತ್ತು ಅಭ್ಯಾಸ ಪಿಚ್ ಮತ್ತು ಎರಡು ಕಾಂಕ್ರೀಟ್​ ಪಿಚ್‌ಗಳನ್ನು ಹೊಂದಿರುವ ಈ ಸ್ಟೇಡಿಯಂ 16.5 ಎಕರೆ ವಿಸ್ತೀರ್ಣದಲ್ಲಿದೆ. ಸಾವಿರಾರು ಜನರು ಕೂತು ಪಂದ್ಯ ವೀಕ್ಷಣೆ ಮಾಡುವ ಉದ್ದೇಶದಿಂದ ಸ್ಟ್ಯಾಂಡ್ ಗಳ ನಿರ್ಮಾಣವಾಗಿದ್ದರೂ ಅವು ಬಳಕೆಯಲ್ಲಿಲ್ಲ. ಸ್ಟ್ಯಾಂಡ್ ಮೇಲೆ ನೆರಳಿನ ವ್ಯವಸ್ಥೆ ಇಲ್ಲದೇ ಇರುವ ಕಾರಣ ಪ್ರತಿಬಾರಿ ಮ್ಯಾಚ್ ನಡೆದಾಗ ಪೆಂಡಾಲ್ ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗುತ್ತದೆ. ತಾತ್ಕಾಲಿಕ ಸ್ಟ್ಯಾಂಡ್​​ಗಳನ್ನು ಕೂಡಾ ನಿರ್ಮಿಸಲಾಗುತ್ತೆ.

ಇನ್ನು ರಣಜಿ ಪೈನಲ್ ಪಂದ್ಯ ಹುಬ್ಬಳ್ಳಿಯಲ್ಲಿ ನಡೆಯುವುದು ಪಿಕ್ಸ್ ಆಗಿರುವ ಕಾರಣ ಈಗಾಗಲೇ ಹತ್ತಕ್ಕೂ ಹೆಚ್ಚು ಸಿಬ್ಬಂದಿ ‌ಪಿಚ್‌ ಸಿದ್ದೊಗೊಳಿಸುವ ಕಾರ್ಯದಲ್ಲಿ ನಿರತವಾಗಿದ್ದು, ಕಳೆದ ಒಂದು ವಾರದಿಂದ ಈ ಸಂಬಂಧಿತ ಕೆಲಸಗಳು ನಡೆಯುತ್ತಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿರುವ KSCA ಕೂಡ ಮೈದಾನವನ್ನು ಪರಿಶೀಲನೆ ನಡೆಸಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×