Horoscope Today 23 March – ದಿನಭವಿಷ್ಯ
Daily Horoscope Mach 23:ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಸೋಮವಾರದಂದು ಒಳ್ಳೆಯದರ ಕಡೆ ಮನಸ್ಸು ಹರಿಯಲಿ, ಇನ್ನೊಬ್ಬರ ಸಂಪತ್ತಿನ ಮೇಲೆ ಕೆಟ್ಟ ಕಣ್ಣು, ನಿಮ್ಮ ಪ್ರಭಾವದ ಬಳಕೆ, ವೈಯಕ್ತಿಕ ದ್ವೇಷ ಇದೆಲ್ಲ ಈ ದಿನದ ವಿಶೇಷ.
ಮೇಷ ರಾಶಿ:
ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು. ಇಂದು ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುವಿರಿ. ಒಳ್ಳೆಯದನ್ನು ಸಾಧಿಸುವ ನಿಮಗೆ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಬೇಕು. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು.
ವೃಷಭ ರಾಶಿ :
ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವ್ಯಾಪಾರ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೆ ಒಳಗಾಗಬಹುದು. ಉದ್ಯೋಗವನ್ನು ಹುಡುಕುತ್ತಿರುವ ಜನರು ಅನಧಿಕೃತ ಜನರ ಸಂಪರ್ಕದಿಂದ ತೊಂದರೆಗಳನ್ನು ಎದುರಿಸಬೇಕಾಗಬಹುದು. ಆಪತ್ತಿಗಾಗಿ ಇಟ್ಟ ಸಂಪತ್ತಿನ ವಿನಿಯೋಗ ಮಾಡುವ ಸ್ಥಿತಿಯು ಬರುವುದು. ಏಕಾಂಗಿಯಾಗಿ ಇರುವುದನ್ನು ಇಷ್ಟಪಡುವುದು ಅನಿವಾರ್ಯವಾಗಲಿದೆ. ನಿಮ್ಮನ್ನು ಪ್ರಕಟಪಡಿಸಿಕೊಳ್ಳುವುದು ಇಷ್ಟವಿದ್ದರೂ ಸಾಧಿಸಲಾಗದು.
ಮಿಥುನ ರಾಶಿ:
ಇಂದು ಹಣಕಾಸಿನಿಂದ ಆಗುವ ಯಾವುದೇ ಅಪಾಯವನ್ನು ತೆಗೆದುಕೊಳ್ಳುವ ಮನಸ್ಸು ಮಾಡುವುದು ಬೇಡ. ಸಂಬಂಧದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಮಕ್ಕಳ ಆರೋಗ್ಯದ ಬಗ್ಗೆ ಮನಸ್ಸು ಚಿಂತಿಸಲಿದೆ. ಅಪರಿತರು ನಿಮ್ಮನ್ನು ಪರಿಚಯ ಮಾಡಿಕೊಳ್ಳಬಹುದು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಸಂಗಾತಿಯ ನಡುವಿನ ಸಂಬಂಧವು ದುರ್ಬಲವಾಗಲಿದ್ದು, ಗಟ್ಟಿಯಾಗಲು ತಂತ್ರವನ್ನು ಬಳಸುವಿರಿ.
ಕರ್ಕಾಟಕ ರಾಶಿ:
ನೀವು ಕುಟುಂಬದ ಜೊತೆ ಎಲ್ಲೋ ಪ್ರಯಾಣಿಸಲು ತೀರ್ಮಾನಮಾಡಿ ಹೊರಡುವಿರಿ. ಇಂದು ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಹೆಚ್ಚಾಗುತ್ತದೆ. ಉಪಕಾರದ ಸ್ಮರಣೆಯು ಅಲ್ಲಗಳೆದು ಸಂತೋಷದಿಂದ ಇರುವಿರಿ. ನಿಮ್ಮಿಂದ ಕೆಲಸವಾಗಲು ನಿಮ್ಮನ್ನು ಹೊಗಳಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ಅವಿವಾಹಿತರ ವಿವಾಹಕ್ಕೆ ಸಂಬಂಧಿಸಿದಂತೆ ಶುಭ ವಾರ್ತೆಯು ಇರಲಿದೆ.
ಸಿಂಹ ರಾಶಿ:
ಸ್ನೇಹಿತರ ಜೊತೆಗೆ ಸಮಯ ಕಳೆಯುವುದು ನಿಮಗೆ ಸಂತೋಷವಾಗಲಿದೆ. ಇಂದು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಯಾವುದೋ ಕಾರಣಕ್ಕೆ ಕೊಟ್ಟ ಹಣ ವಾಪಾಸಾಗದು. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಕುಶಲತೆಯಿಂದ ಕೆಲಸವನ್ನು ಮಾಡಿ. ಹೂಡಿಕೆಯ ವ್ಯವಹಾರವು ಕೆಲವರಲ್ಲಿ ಮಾತ್ರ ಇರಲಿ.
ಕನ್ಯಾ ರಾಶಿ:
ನಿಮ್ಮ ಲಾಭವನ್ನು ಗ್ರಾಹಕರಿಂದ ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಹರಿದು ಹೋದ ಮನಸ್ಸುಗಳನ್ನು ಕೂಡಿಸುವುದು ಕಷ್ಟವಾದೀತು. ಜೀವನದಲ್ಲಿ ಉತ್ಸಾಹ ತುಂಬಿಕೊಳ್ಳುವ ವ್ಯಕ್ತಿಯನ್ನು ಹುಡುಕಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು. ದೂರದ ವಾಹನ ಚಾಲನೆಯಲ್ಲಿ ಜಾಗರೂಕತೆ ಇರಲಿ. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನಿರುವುದು.
ತುಲಾ ರಾಶಿ:
ಇಂದು ಸರಿಯಾಗಿ ಯೋಚಿಸದೆ ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯಮಿಗಳು ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಕೃತಜ್ಞತೆ ಭಾವವನ್ನು ಪ್ರಕಟಿಸುವಿರಿ. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಧಾರ್ಮಿಕ ಭಾವವು ನಿಮ್ಮಲ್ಲಿ ಜಾಗರೂಕವಾಗಬಹುದು. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಕೆಲವರನ್ನು ನೀವು ನಂಬಬೇಕಾಗುತ್ತದೆ.
ವೃಶ್ಚಿಕ ರಾಶಿ:
ಪರರ ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುವರು. ದೀರ್ಘಕಾಲ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು.
ಧನು ರಾಶಿ:
ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ಆಸ್ತಿಯಲ್ಲಿ ಹೂಡಿಕೆ ಮಾಡುವ ಮೊದಲು ಸರಿಯಾಗಿ ಯೋಚಿಸಿ. ನಿಮ್ಮ ಮಾತನ್ನು ನಿಯಂತ್ರಿಸಿ. ಇಂದು ನೀವು ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಬಹುದು. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ.
ಮಕರ ರಾಶಿ:
ಉದ್ಯೋಗಸ್ಥರು ಸವಾಲಿನ ಕೆಲಸಗಳನ್ನು ಬಹಳ ಎಚ್ಚರಿಕೆಯಿಂದ ನಿಭಾಯಿಸಬೇಕು. ನಿಮ್ಮ ವೃತ್ತಿಜೀವನದಲ್ಲಿ ಸಕಾರಾತ್ಮಕ ಮನಸ್ಥಿತಿಯೊಂದಿಗೆ ಮುನ್ನಡೆಯಿರಿ. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು. ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಕುರುಡಾಗಿ ಯಾವುದನ್ನೂ ನಂಬುವುದು ಬೇಡ.
ಕುಂಭ ರಾಶಿ:
ಇಂದು ಪ್ರೀತಿಯ ಸಂಬಂಧಗಳಲ್ಲಿ ಮಾಧುರ್ಯವಿರಲಿದೆ. ಕೆಲಸದ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ಇಂದು ಖರ್ಚುಗಳನ್ನು ನಿಯಂತ್ರಿಸಿ. ವ್ಯವಹಾರದಲ್ಲಿ ಆತ್ಮವಿಶ್ವಾಸದಿಂದ ಇರಿ. ಭಯಪಡುವ ಅವಶ್ಯಕತೆ ಇರುವುದಿಲ್ಲ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಮಾಡಿ. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು.
ಮೀನ ರಾಶಿ:
ಇಂದು ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಶತ್ರುಗಳನ್ನು ನಿಮ್ಮ ಪ್ರಭಾವವನ್ನು ಬಳಸಿ ನಿಗ್ರಹ ಮಾಡುವಿರಿ ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 

