HomeNewsHotel Gas Crisis-ಹೋಟೆಲ್ ಗ್ಯಾಸ್ ರಿಟ್ |Kannada Folks

Hotel Gas Crisis-ಹೋಟೆಲ್ ಗ್ಯಾಸ್ ರಿಟ್ |Kannada Folks

Bengaluru Hotels Approach High Court Over Gas

Hotel Gas Crisis-ಹೋಟೆಲ್ ಗ್ಯಾಸ್ ರಿಟ್

ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.5 Key Changes You Must Know: ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರದಿಂದ ಬಿಗ್  ಅಪ್‌ಡೇಟ್; ತಪ್ಪದೇ ತಿಳಿಯಲೇಬೇಕಾದ ಕೇಂದ್ರದ 5 ಹೊಸ ನಿಯಮಗಳು! | LPG Cylinder  Changes: 5 Important Updates for ...

Read this : Davanagere south by election Ticket Fight ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್| Kannada Folks

ಬೆಂಗಳೂರು, ಮಾರ್ಚ್​​ 17: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ.

ಹೈಕೋರ್ಟ್​ಗೆ ರಿಟ್ ಅರ್ಜಿ

ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ.

ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್​ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್​​ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್​​ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ನಷ್ಟದಲ್ಲಿಯೇ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ನೂರಾರು ಕೋಟಿ ರೂಪಾಯಿ ಹೋಟೆಲ್​​ ಉದ್ಯಮಕ್ಕೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments