HomeNewsIndia vs West Indies T20 WC Semi-Final Decider - ವಿಶ್ವಕಪ್ ಸೆಮಿಫೈನಲ್‌|Kannada Folks

India vs West Indies T20 WC Semi-Final Decider – ವಿಶ್ವಕಪ್ ಸೆಮಿಫೈನಲ್‌|Kannada Folks

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಭಾರತ ಪ್ರವೇಶಿಸಲು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯ ಗೆಲ್ಲಲೇಬೇಕು.

India vs West Indies T20 WC Semi-Final Decider – ವಿಶ್ವಕಪ್ ಸೆಮಿಫೈನಲ್‌

2026ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ಒಂದು ಪಂದ್ಯವನ್ನು ಸೋತು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಸೆಮಿಫೈನಲ್​ಗೇರಬೇಕೆಂದರೆ ತನ್ನ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಮಾರ್ಚ್ 1, 2026 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ವರ್ಚುವಲ್ ಕ್ವಾರ್ಟರ್ ಫೈನಲ್‌ನಂತಿದ್ದು, ಗುಂಪು 1 ರಿಂದ ಯಾವ ತಂಡ ಎರಡನೇ ತಂಡವಾಗಿ ಸೆಮಿಫೈನಲ್ ತಲುಪಲಿದೆ ಎಂಬುದನ್ನು ನಿರ್ಧರಿಸುತ್ತದೆ. ಆದಾಗ್ಯೂ ಯಾವುದಾದರೂ ಕಾರಣದಿಂದ ಈ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್‌ ಟಿಕೆಟ್ ಸಿಗಲಿದೆ ಎಂಬುದು ಪ್ರಶ್ನೆಯಾಗಿದೆ.What India needs to do to qualify for T20 World Cup 2026 semi-finals

Read this – Mangaluru Job Scam; ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ|Kannada Folks

ಪಂದ್ಯ ರದ್ದಾದರೆ, ಸೆಮಿಫೈನಲ್‌ ಟಿಕೆಟ್ ಯಾರಿಗೆ?

ಗ್ರೂಪ್ 1 ಅಂಕ ಪಟ್ಟಿಯಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಪ್ರಸ್ತುತ ಸಮಾನ ಅಂಕಗಳನ್ನು ಹೊಂದಿವೆ. ವೆಸ್ಟ್ ಇಂಡೀಸ್ ಎರಡು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಭಾರತ ಕೂಡ ಎರಡು ಅಂಕಗಳನ್ನು ಹೊಂದಿದೆ. ಆದರೆ ನೆಟ್ ರನ್ ರೇಟ್​ ವಿಚಾರದಲ್ಲಿ ವಿಂಡೀಸ್​ಗಿಂತ ಭಾರತ ಹಿಂದೆ ಇರುವುದರಿಂದ ಮೂರನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆದ್ದ ತಂಡವು ನಾಲ್ಕು ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್‌ಗೆ ಮುನ್ನಡೆಯುತ್ತದೆ. ಆದಾಗ್ಯೂ, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವು ಮಳೆಯಿಂದ ರದ್ದಾದರೆ ಅಥವಾ ಫಲಿತಾಂಶವಿಲ್ಲದೆ ಕೊನೆಗೊಂಡರೆ, ಐಸಿಸಿ ನಿಯಮಗಳ ಪ್ರಕಾರ, ಎರಡೂ ತಂಡಗಳು ತಲಾ ಒಂದು ಅಂಕವನ್ನು ಪಡೆಯುತ್ತವೆ.

ವಿಂಡೀಸ್​ಗೆ ಸೆಮೀಸ್ ಟಿಕೆಟ್!

ಈ ಪರಿಸ್ಥಿತಿಯಲ್ಲಿ, ಎರಡೂ ತಂಡಗಳು ಒಟ್ಟು ತಲಾ 3 ಅಂಕಗಳನ್ನು ಪಡೆಯುತ್ತವೆ. ಹೀಗಾಗಿ ಸೆಮಿಫೈನಲ್‌ಗೆ ಮುನ್ನಡೆಯುವ ತಂಡವನ್ನು ನೆಟ್ ರನ್​ ರೇಟ್​ (NRR) ಮೂಲಕ ನಿರ್ಧರಿಸಲಾಗುತ್ತದೆ. ವೆಸ್ಟ್ ಇಂಡೀಸ್‌ನ ನೆಟ್ ರನ್​ ರೇಟ್ +1.791 ಆಗಿದ್ದು, ಭಾರತದ ನೆಟ್ ರನ್​ ರೇಟ್ -0.100 ಆಗಿದೆ. ಅಂದರೆ ನೆಟ್ ರನ್​ ರೇಟ್ ವಿಚಾರದಲ್ಲಿ ಭಾರತಕ್ಕಿಂತ ವೆಸ್ಟ್ ಇಂಡೀಸ್ ಮುಂದಿದೆ. ಆದ್ದರಿಂದ, ಮಳೆ ಅಥವಾ ಯಾವುದೇ ಇತರ ಕಾರಣದಿಂದಾಗಿ ಪಂದ್ಯ ರದ್ದಾದರೆ, ವೆಸ್ಟ್ ಇಂಡೀಸ್ ಸೆಮಿಫೈನಲ್‌ಗೆ ಮುನ್ನಡೆಯುತ್ತದೆ ಮತ್ತು ಭಾರತ ಪಂದ್ಯಾವಳಿಯಿಂದ ಹೊರಹೋಗುತ್ತದೆ.

Read this – E20 Petrol Mileage Impact-E20 ಪೆಟ್ರೋಲ್ ಕಡ್ಡಾಯ ಸವಾರರಿಗೆ ಎಚ್ಚರಿಕೆ

ಪಂದ್ಯದ ದಿನದಂದು ಕೋಲ್ಕತ್ತಾದ ಹವಾಮಾನ ಹೇಗಿರುತ್ತದೆ?

ಹವಾಮಾನ ವರದಿಗಳ ಪ್ರಕಾರ, ಮಾರ್ಚ್ 1 ರಂದು ಕೋಲ್ಕತ್ತಾದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಪಂದ್ಯದ ಸಮಯದಲ್ಲಿ ಹವಾಮಾನವು ಸ್ಪಷ್ಟವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದರರ್ಥ ಅಭಿಮಾನಿಗಳು ಇಡೀ ಪಂದ್ಯವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ ಮತ್ತು ತಂಡಗಳು ತಮ್ಮ ಪ್ರದರ್ಶನದ ಆಧಾರದ ಮೇಲೆ ತಮ್ಮ ಸೆಮಿಫೈನಲ್ ಸ್ಥಾನಗಳನ್ನು ಭದ್ರಪಡಿಸಿಕೊಳ್ಳುತ್ತವೆ. 10 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಪರಸ್ಪರ ಎದುರಾಗಲಿವೆ. ಕಳೆದ ಮುಖಾಮುಖಿಯಲ್ಲಿ ಭಾರತ ಸೋತಿತ್ತು. ಆದ್ದರಿಂದ, ಭಾರತ ತಂಡ ತನ್ನ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×