HomeNewsIndianOil LPG Boost-ಇಂಡಿಯನ್ ಆಯಿಲ್ LPG ಹೆಚ್ಚಳ

IndianOil LPG Boost-ಇಂಡಿಯನ್ ಆಯಿಲ್ LPG ಹೆಚ್ಚಳ

Auto LPG Supply Up, Dual Fuel Advised

IndianOil LPG Boost-ಇಂಡಿಯನ್ ಆಯಿಲ್ LPG ಹೆಚ್ಚಳ

ಕರ್ನಾಟಕದಲ್ಲಿ ತೀವ್ರ ಆಟೋ ಎಲ್​ಪಿಜಿ ಕೊರತೆಯಿಂದ ಚಾಲಕರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್​ಪಿಜಿ ಕೊರತೆ, ಖಾಸಗಿ ಪಂಪ್‌ಗಳ ಸ್ಥಗಿತದಿಂದ ಇಂಧನಕ್ಕಾಗಿ ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಇಂಡಿಯನ್ ಆಯ್ಲ್ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸುವುದಾಗಿ ಹೇಳಿದೆ. ಅಲ್ಲದೆ ಡ್ಯುಯಲ್ ಫ್ಯೂಯಲ್ ವ್ಯವಸ್ಥೆ ಹೊಂದಿರುವವರು ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಸಲಹೆ ನೀಡಿದೆ.ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ.  50ಕ್ಕೆ ಹೆಚ್ಚಿಸಿದ ಕೇಂದ್ರ

Read this : Bommai Rejects Doctorate-ಬೊಮ್ಮಾಯಿ ಡಾಕ್ಟರೇಟ್ ನಿರಾಕರಣೆ

ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಆಟೋ ಎಲ್​ಪಿಜಿ (LPG) ಕೊರತೆ ಸಮಸ್ಯೆ ದಿನೇದಿನೇ ಗಂಭೀರವಾಗುತ್ತಿದ್ದು, ಇದರ ಪರಿಣಾಮವಾಗಿ ಆಟೋ ಚಾಲಕರ ಜೀವನಸಂಕಷ್ಟಕ್ಕೆ ಸಿಲುಕಿದೆ. ಇಂಡಿಯನ್ ಆಯ್ಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ಸಂಸ್ಥೆ ಕರ್ನಾಟಕದಾದ್ಯಂತ ಆಟೋ ಎಲ್​ಪಿಜಿ ಪೂರೈಕೆಯನ್ನು ಹೆಚ್ಚಿಸಿರುವುದಾಗಿ ಭಾನುವಾರ ತಿಳಿಸಿದೆ.

ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಸಲಹೆ

ರಾಜ್ಯದಲ್ಲಿ ಒಟ್ಟು 72 ಆಟೋ ಎಲ್​ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 55 ಅನ್ನು ಐಒಸಿಎಲ್ ನಿರ್ವಹಿಸುತ್ತದೆ. 300ಕ್ಕೂ ಹೆಚ್ಚು ಖಾಸಗಿ ಡಿಸ್ಪೆನ್ಸಿಂಗ್ ಕೇಂದ್ರಗಳಿದ್ದರೂ, ಸುಮಾರು 80 ಪ್ರತಿಶತ ಸ್ಥಗಿತಗೊಂಡಿರುವುದರಿಂದ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಮೂಲಸೌಕರ್ಯ ಕೊರತೆ ಮತ್ತು ಪೂರೈಕೆ ಸಾಮರ್ಥ್ಯದ ಅಭಾವದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಬೆಂಗಳೂರಿನಲ್ಲಿ ಸರ್ಕಾರಿ ಪಂಪ್‌ಗಳಲ್ಲಿ ಲೀಟರ್‌ಗೆ 89.52 ರೂ. ದರದಲ್ಲಿ LPG ಲಭ್ಯವಿದ್ದರೆ, ಖಾಸಗಿ ಪಂಪ್‌ಗಳಲ್ಲಿ ಬೆಲೆ 99ರಿಂದ 105 ರೂಪಾಯಿವರೆಗೆ ಇರುವುದರಿಂದ ಜನರು ಹೆಚ್ಚಾಗಿ ಸರ್ಕಾರಿ ಪಂಪ್‌ಗಳಿಗೆ ಮೊರೆ ಹೋಗುತ್ತಿದ್ದಾರೆ. ಪಂಪ್​ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ರಾಜ್ಯದಲ್ಲಿನ ಸುಮಾರು 70 ಪ್ರತಿಶತ ಆಟೋಗಳು ಡ್ಯುಯಲ್ ಫ್ಯೂಯಲ್ ವ್ಯವಸ್ಥೆ ಹೊಂದಿರುವುದರಿಂದ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಐಒಸಿಎಲ್ ಸಲಹೆ ನೀಡಿದೆ.

ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ

ಇದರ ನಡುವೆ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ಹಲವು ಆಟೋ ಚಾಲಕರ ಸಂಘಟನೆಗಳು ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿವೆ. ಸಂಘಟನೆಯ ಅಧ್ಯಕ್ಷ ಎಂ. ಮಂಜುನಾಥ್ ಹೇಳುವಂತೆ, ಆದಾಯ ಕುಸಿತ ಮತ್ತು ಇಂಧನ ಕೊರತೆಯಿಂದ ಚಾಲಕರು ಇಎಮ್ಐ, ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಶುಲ್ಕಗಳನ್ನು ಪಾವತಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರತಿ ಆಟೋಗೆ ದಿನಕ್ಕೆ ಕನಿಷ್ಠ 6 ಲೀಟರ್ ಎಲ್​ಪಿಜಿ ಪೂರೈಕೆ ಖಚಿತಪಡಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಬೆಂಗಳೂರಿನಲ್ಲಿ ದಿನನಿತ್ಯ ಸುಮಾರು 300 ಟನ್ ಎಲ್​ಪಿಜಿ ಅವಶ್ಯಕವಿದ್ದು, ಈ ಸಮಸ್ಯೆ ತಕ್ಷಣ ಪರಿಹಾರವಾಗಬೇಕೆಂದು ಒತ್ತಾಯಿಸಲಾಗಿದೆ. ಜೊತೆಗೆ, ಸಿಎನ್​ಜಿ ಪರಿವರ್ತನೆಗೆ ಸರ್ಕಾರ ನೆರವು ನೀಡಬೇಕೆಂದು ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಿವೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments