ನವೆಂಬರ್ 1-19ರ ನಡುವೆ ಏರ್ ಇಂಡಿಯಾ ಹತ್ತಬೇಡಿ: ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ
ಏರ್ ಇಂಡಿಯಾ ಪ್ರಯಾಣಿಕರಿಗೆ ಖಲಿಸ್ತಾನಿ ಭಯೋತ್ಪಾದಕ ಎಚ್ಚರಿಕೆ:
ನವೆಂಬರ್ 1ರಿಂದ 19ನೇ ದಿನಾಂಕದವರೆಗೂ ಪ್ರಯಾಣಿಕರು ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸಬಾರದು. ಈ ಅವಧಿಯಲ್ಲಿ ವಿಮಾನದ ಮೇಲೆ ದಾಳಿ ನಡೆಯಲಿದೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಹಾಕಿದ್ದಾನೆ. ಕಳೆದ ವರ್ಷ ಕೂಡ ಆತ ನವೆಂಬರ್ 19ರಂದು ಏರ್ ಇಂಡಿಯಾ ಮೇಲೆ ದಾಳಿ ನಡೆಯಲಿದೆ ಎಂದು ಬೆದರಿಕೆ ಒಡ್ಡಿದ್ದ.
- ನವೆಂಬರ್ 1 ರಿಂದ 19ನೇ ತಾರೀಕಿನವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ
- ಏರ್ ಇಂಡಿಯಾ ಪ್ರಯಾಣಿಕರಿಗೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ
- ಕಳೆದ ವರ್ಷ ಕೂಡ ನವೆಂಬರ್ 19ರಂದು ಏರ್ ಇಂಡಿಯಾ ಮೇಲೆ ದಾಳಿ ಬೆದರಿಕೆ ಹಾಕಿದ್ದ ಪನ್ನು
- ಹೊಸದಿಲ್ಲಿ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು, ಏರ್ ಇಂಡಿಯಾ ವಿಮಾನಕ್ಕೆ ಮತ್ತೆ ಬೆದರಿಕೆ ಒಡ್ಡಿದ್ದಾನೆ. ನವೆಂಬರ್ 1 ರಿಂದ 19ನೇ ತಾರೀಕಿನವರೆಗೆ ಪ್ರಯಾಣಿಕರು ಏರ್ ಇಂಡಿಯಾ ವಿಮಾನದಲ್ಲಿ ಓಡಾಡದಂತೆ ಆತ ಎಚ್ಚರಿಕೆ ಕೊಟ್ಟಿದ್ದಾನೆ. ಸಿಖ್ ಹತ್ಯಾಕಾಂಡಕ್ಕೆ 40 ವರ್ಷದ ತುಂಬುತ್ತಿರುವ ಸಂದರ್ಭದಲ್ಲಿಯೇ ಆತ, ಈ ನಿರ್ದಿಷ್ಟ ದಿನಾಂಕಗಳಲ್ಲಿ ಏರ್ ಇಂಡಿಯಾ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಬೆದರಿಸಿದ್ದಾನೆ.
ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಎಂಬ ಸಂಘಟನೆಯ ಸಂಸ್ಥಾಪಕನಾಗಿರುವ ಪನ್ನು, ಕೆನಡಾ ಮತ್ತು ಅಮೆರಿಕ ಎರಡೂ ದೇಶಗಳ ಪೌರತ್ವ ಹೊಂದಿದ್ದಾನೆ. ಕಳೆದ ವರ್ಷ ಕೂಡ ಆತ ಇದೇ ಸಮಯಕ್ಕೆ ಏರ್ ಇಂಡಿಯಾಗೆ ಬೆದರಿಕೆ ಒಡ್ಡಿದ್ದ.ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕಳೆದ ಒಂದು ವಾರದಿಂದ ದೇಶದ ವಿವಿಧ ಭಾಗಗಳಿಂದ ಸಂಚರಿಸುವ ನೂರಾರು ವಿಮಾನಗಳಿಗೆ ಬೆದರಿಕೆ ಕರೆಗಳು ಬರುತ್ತಿವೆ. ಇದರಿಂದ ಅನೇಕ ವಿಮಾನಗಳು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ದಿಕ್ಕು ಬದಲಿಸಿ ತುರ್ತು ಭೂಸ್ಪರ್ಶ ಮಾಡಿದ ಘಟನೆಗಳೂ ನಡೆದಿವೆ. ಭಾನುವಾರ ಬೆಳಗಾವಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಕೂಡ ಬೆದರಿಕೆ ಇ-ಮೇಲ್ ರವಾನೆಯಾಗಿದೆ. ಆದರೆ ಇವೆಲ್ಲವೂ ಹುಸಿ ಕರೆಗಳು ಎನ್ನುವುದು ಸಾಬೀತಾಗಿದೆ. ಈ ಬೆದರಿಕೆಗಳ ನಡುವೆ ಖಲಿಸ್ತಾನಿ ಉಗ್ರ ಪನ್ನು ಮತ್ತೊಂದು ಬೆದರಿಕೆ ರವಾನಿಸಿದ್ದಾನೆ.
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಸೇರಿದಂತೆ, ಕೆನಡಾದಲ್ಲಿರುವ ಖಲಿಸ್ತಾನಿ ಬೆಂಬಲಿಗರನ್ನು ಭಾರತ ಗುರಿ ಮಾಡುತ್ತಿದೆ ಎಂಬ ಕೆನಡಾ ಸರ್ಕಾರದ ಆರೋಪದ ಕುರಿತು ಭಾರತದ ಜತೆ ರಾಜತಾಂತ್ರಿಕ ಬಿಕ್ಕಟ್ಟು ಸಹ ತೀವ್ರಗೊಂಡಿದೆ.
- ಕಳೆದ ವರ್ಷವೂ ಇದೇ ಅವಧಿಯಲ್ಲಿ ಬೆದರಿಕೆ2023ರ ನವೆಂಬರ್ನಲ್ಲಿ ಕೂಡ ಉಗ್ರ ಪನ್ನು ಇದೇ ರೀತಿಯ ಬೆದರಿಕೆ ಹಾಕಿ ವಿಡಿಯೋ ಬಿಡುಗಡೆ ಮಾಡಿದ್ದ. ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಓಡಾಡದಂತೆ ಜನರಿಗೆ ಆತ ಎಚ್ಚರಿಕೆ ನೀಡಿದ್ದ. ಜತೆಗೆ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡುವುದಾಗಿಯೂ ಹೇಳಿಕೊಂಡಿದ್ದ. ಅದೇ ದಿನ ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನಡೆದಿತ್ತು.
- Ravana & Family Episode Ravana had seven brothers and two sisters
- ಇದರ ಬಳಿಕ ಕಳೆದ ವರ್ಷದ ಡಿಸೆಂಬರ್ನಲ್ಲಿ, ಅಮೆರಿಕದಲ್ಲಿ ಆತನ ಹತ್ಯೆಗೆ ವಿಫಲ ಪ್ರಯತ್ನ ನಡೆದಿರುವುದಾಗಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ವಿಡಿಯೋ ಮಾಡಿದ್ದ ಪನ್ನು, ಡಿಸೆಂಬರ್ 13 ಅಥವಾ ಅದಕ್ಕೂ ಮುನ್ನ ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ. 2001ರ ಡಿಸೆಂಬರ್ 13ರಂದು ದಿಲ್ಲಿಯಲ್ಲಿನ ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದಿತ್ತು.
ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಆತನ ವಿರುದ್ಧ ಅಪರಾಧ ಸಂಚು, ಧರ್ಮದ ಆಧಾರದಲ್ಲಿ ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು ಮತ್ತು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿಕೊಂಡಿತ್ತು
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ