HomeNewsಜಮ್ಮು - ಕಾಶ್ಮೀರದಲ್ಲಿ ಉಗ್ರರ ದಾಳಿ

ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿ

Spread the love

ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿ

ನಟ ಶಾರುಖ್ ಖಾನ್ ಅವರು ಪಹಲ್ಗಾಮ್‌ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಉಗ್ರರ ದಾಳಿಯನ್ನು ಅವರು ಖಂಡಿಸಿದ್ದಾರೆ. ಒಂದು ರಾಷ್ಟ್ರವಾಗಿ ನಾವು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅವರು ಹೇಳಿದ್ದಾರೆ. ಶಾರುಖ್ ಖಾನ್ ಮಾತ್ರವಲ್ಲದೇ ಅನುಷ್ಕಾ ಶರ್ಮಾ, ಕಿಯಾರಾ ಅಡ್ವಾಣಿ, ಅಕ್ಷಯ್ ಕುಮಾರ್ ಮುಂತಾದವರು ಕೂಡ ಪ್ರತಿಕ್ರಿಯಿಸಿದ್ದಾರೆ.Pahalgam Terror Attack: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ದಾಳಿ ಹೊಣೆ ಹೊತ್ತ TRF  ಸಂಘಟನೆಯ ಹಿನ್ನಲೆಯೇನು? - Kannada News | Who is the terrorist organization  TRF? Who is responsible for the Pahalgam massacre ...

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್​ನಲ್ಲಿ (Pahalgam) ನಡೆದ ಉಗ್ರರ ದಾಳಿಯಿಂದ 28 ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದವರನ್ನೇ ಟಾರ್ಗೆಟ್ ಮಾಡಿ ಹತ್ಯಾಕಾಂಡ ನಡೆಸಲಾಗಿದೆ. ಈ ಘಟನೆಯಲ್ಲಿ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಉಗ್ರರ ದಾಳಿಗೆ (Pahalgam Terror Attack) ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಪಹಲ್ಗಾಮ್ ಹತ್ಯಾಕಾಂಡವನ್ನು ಖಂಡಿಸಿದ್ದಾರೆ. ಶಾರುಖ್ ಖಾನ್ (Shah Rukh Khan), ಅನುಷ್ಕಾ ಶರ್ಮಾ, ಕಿಯಾರಾ ಅಡ್ವಾಣಿ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಶಾರುಖ್ ಖಾನ್ ಅವರು ಪ್ರತಿಕ್ರಿಯಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿ ಹಾಗೂ ಎಕ್ಸ್ ಖಾತೆಯಲ್ಲಿ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ‘ಪಹಲ್ಗಾಮ್‌ನಲ್ಲಿ ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು. ಇಂತಹ ಸಮಯದಲ್ಲಿ, ನಾವು ದೇವರ ಕಡೆಗೆ ನೋಡಿ, ಸಂತ್ರಸ್ತ ಕುಟುಂಬಗಳಿಗಾಗಿ ಪ್ರಾರ್ಥಿಸಬಹುದು ಮತ್ತು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಬಹುದು. ಒಂದು ರಾಷ್ಟ್ರವಾಗಿ ನಾವು ಒಗ್ಗಟ್ಟಿನಿಂದ ಬಲವಾಗಿ ನಿಂತು ಈ ಘೋರ ಕೃತ್ಯದ ವಿರುದ್ಧ ನ್ಯಾಯವನ್ನು ಪಡೆಯೋಣ’ ಎಂದು ಶಾರುಖ್ ಖಾನ್ ಬರೆದುಕೊಂಡಿದ್ದಾರೆ.ಕಾಶ್ಮೀರ ಉಗ್ರರ ದಾಳಿಗೆ ಭಾರತೀಯರು ಮಾತ್ರವಲ್ಲ ವಿದೇಶಿಗರೂ ಬಲಿ! | Attack in Jammu  Kashmir Israeli Italian tourists including Indians died - News18 ಕನ್ನಡ

ನಟ ಅಕ್ಷಯ್ ಕುಮಾರ್ ಕೂಡ ಈ ಘಟನೆ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ತಿಳಿದು ಆತಂಕವಾಯಿತು. ಈ ರೀತಿ ಮುಗ್ಧ ಜನರನ್ನು ಕೊಲ್ಲುವುದು ಘೋರ ದುಷ್ಟತನ. ಮೃತರ ಕುಟುಂಬಗಳಿಗಾಗಿ ಪ್ರಾರ್ಥನೆಗಳು’ ಎಂದು ಅಕ್ಷಯ್ ಕುಮಾರ್ ಅವರು ಬರೆದುಕೊಂಡಿದ್ದಾರೆ.

‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ಹೃದಯ ಛಿದ್ರವಾಗಿದೆ. ಅವರ ಕುಟುಂಬಗಳಿಗೆ ಹೃದಯಪೂರ್ವಕ ಪ್ರಾರ್ಥನೆ ಮತ್ತು ಸಂತಾಪಗಳು. ಇದು ಎಂದಿಗೂ ಮರೆಯಲಾಗದ ಘೋರ ದಾಳಿ’ ಎಂದು ಅನುಷ್ಕಾ ಶರ್ಮಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.

Two people including the driver were killed in auto collided with two bmtc buses in Bengaluru

Former minister B sriramulu slams on govt karnataka is becoming a beggar state

Prime Minister Modi appointed Shaktikanta Das as the Principal Secretary

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×