HomeNewsBattle of Shiggavi: Second time Basavaraja Bommai rode to the by-election, this...

Battle of Shiggavi: Second time Basavaraja Bommai rode to the by-election, this time the prestige of his son’s victory – kannada ಶಿಗ್ಗಾವಿ ಕದನ: ಉಪ ಚುನಾವಣೆಗೆ ಎರಡನೇ ಸಲ ಬಸವರಾಜ ಬೊಮ್ಮಾಯಿ ಸಾರಥ್ಯ, ಈ ಬಾರಿ ಮಗನ ಗೆಲುವಿನ ಪ್ರತಿಷ್ಠೆ

Spread the love

ಶಿಗ್ಗಾವಿ ಕದನ: ಉಪ ಚುನಾವಣೆಗೆ ಎರಡನೇ ಸಲ ಬಸವರಾಜ ಬೊಮ್ಮಾಯಿ              ಸಾರಥ್ಯ, ಬಾರಿ ಮಗನ ಗೆಲುವಿನ ಪ್ರತಿಷ್ಠೆ

ಶಿಗಾಂವ್ ಬೈಪೋಲ್ 2024:: ಶಿಗ್ಗಾವಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಎರಡನೇ ಉಪ ಚುನಾವಣೆಯಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗ ಅವರು ಹಾನಗಲ್ ಉಪ ಚುನಾವಣೆಯಲ್ಲಿ ನೇತೃತ್ವ ವಹಿಸಿದ್ದರು. ಆದರೆ ಆಗ ಸೋಲು ಕಂಡಿದ್ದ ಅವರಿಗೆ ಈಗ ಮಗನ ಗೆಲುವು ಪ್ರತಿಷ್ಠೆಯಾಗಿದೆ

  • ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಉಪ ಚುನಾವಣೆ ಎದುರಿಸಲಿರುವ ಬಿಜೆಪಿ
  • ಸಂಸದರಾಗಿರುವ ಮಾಜಿ ಸಿಎಂ ಬೊಮ್ಮಾಯಿಗೆ ಮಗ ಭರತ್ ಅವರನ್ನು ಗೆಲ್ಲಿಸುವ ಹೊಣೆ
  • ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿರುವ ನಾಲ್ಕನೇ ಬಾರಿ ಉಪ ಚುನಾವಣೆ ಇದುಹಾವೇರಿ: ಶಿಗ್ಗಾವಿ ಉಪ ಚುನಾವಣೆ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದ್ದು, ಹೈವೋಲ್ಟೇಜ್‌ ಕಣವಾಗುವುದು ಬಹುತೇಕ ಸ್ಪಷ್ಟವಾಗಿದೆ. ಇದು ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಎರಡನೇ ಉಪ ಚುನಾವಣೆಯಾಗಲಿದೆ.

      ಈ ಹಿಂದೆ 2021ರ ನವೆಂಬರ್‌ನಲ್ಲಿ ನಡೆದಿದ್ದ ಹಾನಗಲ್‌ ಉಪ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. ತವರು ಜಿಲ್ಲೆಯ ಕ್ಷೇತ್ರವಾದ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಈ ಚುನಾವಣೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದರು.ಉಪ ಚುನಾವಣೆ ಸಿದ್ದತೆ ಕುರಿತು ಬಿಎಸ್‌ವೈ ಜೊತೆ ಬೊಮ್ಮಾಯಿ ಚರ್ಚೆ

    ಪ್ರಸಕ್ತ ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಅಲ್ಲದೇ ಬೊಮ್ಮಾಯಿ ಪುತ್ರ ಭರತ್‌ ಅವರೇ ಬಿಜೆಪಿ ಅಭ್ಯರ್ಥಿಯಾಗಿರುವುದು ಮತ್ತು ಬೊಮ್ಮಾಯಿ ಕ್ಷೇತ್ರದ ಸಂಸದರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಜೆಪಿ ಪಾಳಯದ ಮುಂಚೂಣಿಯಲ್ಲಿ ಅವರೇ ನಿಲ್ಲುವಂತಾಗಿದೆ.

    ಜಿಲ್ಲೆಯಲ್ಲಿ ನಾಲ್ಕನೇ ಉಪ ಚುನಾವಣೆ

    ಜಿಲ್ಲೆಯಲ್ಲಿ ನಾಲ್ಕನೇ ಬಾರಿ ಉಪ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಈ ಹಿಂದಿನ ಮೂರು ಉಪ ಚುನಾವಣೆಗಳ ಪೈಕಿ ಎರಡರಲ್ಲಿ ಬಿಜೆಪಿ ಹಾಗೂ ಒಮ್ಮೆ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಪ್ರಸಕ್ತ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಕದನ ಏರ್ಪಡುವ ನಿರೀಕ್ಷೆ ಮೂಡಿಸಿದೆ.

    2018ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ರಚನೆಯಾಗಿತ್ತು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ 15 ಹಾಗೂ ಜೆಡಿಎಸ್‌ನ ಇಬ್ಬರು ಸೇರಿದಂತೆ 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ತಂಡದಲ್ಲಿ ಹಾವೇರಿ ಜಿಲ್ಲೆಯ ಇಬ್ಬರು ಶಾಸಕರಿದ್ದಿದ್ದು ವಿಶೇಷ. ಹಿರೇಕೆರೂರು ಶಾಸಕರಾಗಿದ್ದ ಬಿ.ಸಿ.ಪಾಟೀಲ್‌ ಹಾಗೂ ರಾಣೆಬೆನ್ನೂರು ಶಾಸಕರಾಗಿದ್ದ ಆರ್‌.ಶಂಕರ್‌ ಈ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಗಳಿಗೆ 2019ರ ಡಿಸೆಂಬರ್‌ನಲ್ಲಿ ಉಪ ಚುನಾವಣೆ ನಡೆದಿತ್ತು.

    ಗೆಲುವಿನ ನಗೆ ಬೀರಿದ್ದ ಬಿಜೆಪಿ

    2019ರ ಉಪ ಚುನಾವಣೆಯಲ್ಲಿ ಹಿರೆಕೇರೂರು ಕ್ಷೇತ್ರದಲ್ಲಿ ಬಿ.ಸಿ.ಪಾಟೀಲ್‌ ಅವರನ್ನೇ ಬಿಜೆಪಿಯಿಂದ ಕಣಕ್ಕಿಳಿಸಲಾಗಿತ್ತು. ಬಿ.ಸಿ.ಪಾಟೀಲ್‌ ಅವರು 85562
    One Nation One Election

    ಮತ ಪಡೆದು ಕಾಂಗ್ರೆಸ್‌ನ ಬಿ.ಎಚ್‌.ಬನ್ನಿಕೋಡ (56495 ಮತಗಳು) ವಿರುದ್ಧ ಗೆಲುವು ಸಾಧಿಸಿದ್ದರು.

    ಇದೇ ವೇಳೆ ರಾಣೆಬೆನ್ನೂರು ಕ್ಷೇತ್ರದ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದ ಆರ್‌.ಶಂಕರ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಕ್ಕಿರಲಿಲ್ಲ. ಅವರ ಬದಲು ಬಿಜೆಪಿಯಿಂದ ಅರುಣಕುಮಾರ್‌ ಗುತ್ತೂರು ಅವರನ್ನು ಕಣಕ್ಕಿಳಿಸಲಾಗಿತ್ತು. ಅರುಣಕುಮಾರ್‌ ಅವರು 95438 ಮತ ಪಡೆದು ಕಾಂಗ್ರೆಸ್‌ನ ಕೆ.ಬಿ.ಕೋಳಿವಾಡ (72216 ಮತಗಳು) ವಿರುದ್ಧ ಗೆಲುವು ಸಾಧಿಸಿದ್ದರು.

    ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್

    ಹಾನಗಲ್‌ ಕ್ಷೇತ್ರದಲ್ಲಿ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ 2021ರಲ್ಲಿ ಉಪ ಚುನಾವಣೆ ನಡೆದಿತ್ತು. ರಾಜ್ಯದಲ್ಲಿಬಿಜೆಪಿ ಸರಕಾರವಿದ್ದ ಈ ಅವಧಿಯಲ್ಲಿಹಾನಗಲ್‌ ಕ್ಷೇತ್ರ ಅಚ್ಚರಿಯ ಫಲಿತಾಂಶ ನೀಡಿದ್ದು ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ 87,300 ಮತ ಪಡೆದು ಗೆಲುವು ಸಾಧಿಸಿದ್ದರು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪ್ತ ಶಿವರಾಜ ಸಜ್ಜನರ್‌ (79874 ಮತಗಳು) ಸೋಲನುಭವಿಸಿದ್ದರು.

    ಶಿಗ್ಗಾವಿ ಉಪ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಕದನ ಏರ್ಪಡುವ ನಿರೀಕ್ಷೆಯಿದೆ. ಅಭ್ಯರ್ಥಿಗಳು ಮತದಾರರಿಗೆ ಹಣ, ಮತ್ತಿತರ ಆಮಿಷಗಳನ್ನು ಒಡ್ಡದೆ ನ್ಯಾಯಸಮ್ಮತ ಮತ್ತು ಭ್ರಷ್ಟಾಚಾರ ಮುಕ್ತ ಚುನಾವಣೆ ನಡೆಸಬೇಕು.

     

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×