Two people including the driver were killed in auto collided with two bmtc buses in Bengaluru
ಬೆಂಗಳೂರು: ಎರಡು ಬಿಎಂಟಿಸಿ ಬಸ್ಗಳಿಗೆ ಸಿಲುಕಿ ಆಟೋ ಅಪ್ಪಚ್ಚಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸೀತಾ ಸರ್ಕಲ್ ಬಳಿ ನಡೆದಿದೆ.
Read this – M kharges outburst in rajya sabha as bjp mp interrupts him
ಮೃತರನ್ನು ಪ್ರಯಾಣಿಕ ವಿಷ್ಣು (80) ಎಂದು ಗುರುತಿಸಲಾಗಿದ್ದು, ಡಾಕ್ಟರ್ ಆಗಿದ್ದರು. ಇನ್ನೂ ಆಟೋ ಚಾಲಕನನ್ನು ಅನಿಲ್ ಕುಮಾರ್ ಎಂದು ತಿಳಿಯಲಾಗಿದೆ.ಡಾ.ವಿಷ್ಣು ಗುರುವಾರ ತಮ್ಮ ಬರ್ತ್ಡೇ ಆಚರಿಸಿಕೊಂಡಿದ್ದರು. ತಂದೆಯ ಬರ್ತ್ಡೇಗಾಗಿ ವಿದೇಶದಿಂದ ಬಂದಿದ್ದ ಮಗ, ಗುರುವಾರ ವಾಪಸ್ ತೆರಳಿದ್ದರು.
Read this – Appu Kannada Movie Full Songs Lyrics
ಆದರೆ ಮಗ ವಿದೇಶಕ್ಕೆ ಹೋಗಿ ತಲುಪುವ ಮುನ್ನ ತಂದೆ ಮೃತಪಟ್ಟಿದ್ದಾರೆ. ಇಂದು ಆಟೋದಲ್ಲಿ ವಿಷ್ಣು ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್, ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಇಂದಿರಾನಗರ ಡಿಪೋಗೆ ಸೇರಿದ್ದ ಬಸ್ ಇದಾಗಿದ್ದು, ಬಸ್ ಸಂಖ್ಯೆ ಏಂ57ಈ9574 ಎಂದು ತಿಳಿಯಲಾಗಿದೆ.ಬನಶಂಕರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.